ರಾಮನಗರ:- ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ರಾಮನಗರ ಜಿಲ್ಲೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಕೊಡಲಿದ್ದಾರೆ.
ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1ಕ್ಕೆ ಮತ್ತೆ ವಾಪಸ್ಸಾಗಲಿದ್ದಾರೆ.
ವೇದವಿದ್ಯಾ ವಿಹಾರ ಗುರುಕುಲದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿತರಿಗಷ್ಟೇ ಪ್ರವೇಶಕ್ಕೆ ಅವಕಾಶವಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.



