ಸಚಿವ ಪ್ರಲ್ಹಾದ ಜೋಷಿ ಅವರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪಶ್ಚಿಮ ಪದವೀಧರ ಚುನಾವಣೆ 2026ರ ಮತದಾರರ ನೋಂದಣಿ ಜಾಗೃತಿಯ ಅಭಿಯಾನವನ್ನು ಕೈಗೊಂಡಿರುವ ಗದುಗಿನ ನಿತ್ಯವಿಜಯ ಪ್ರತಿಷ್ಠಾನದ ಸಂಸ್ಥಾಪಕರು, ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸದಸ್ಯರಾದ ಡಾ. ಎಸ್.ಎಚ್. ಶಿವನಗೌಡರ ಅವರ ನೇತೃತ್ವದ ತಂಡವು ಗದಗ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಿತು.

Advertisement

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಕಾರ್ಯಾಲಯಕ್ಕೆ ಭೇಟಿ ನೀಡಿದ ತಂಡವು ಅವರನ್ನು ಸನ್ಮಾನಿಸಿ ಗೌರವಿಸಿತು. ಈ ಸಂದರ್ಭದಲ್ಲಿ ಔಪಚಾರಿಕವಾಗಿ ಮಾತನಾಡಿದ ಪ್ರಹ್ಲಾದ ಜೋಷಿ ಅವರು, ಮತದಾರರ ನೋಂದಣಿ ಜಾಗೃತಿ ಅಭಿಯಾನವು ಮತಕ್ಷೇತ್ರದ ಎಲ್ಲೆಡೆಯೂ ನಡೆಯುವಂತಾಗಲಿ. ಬಿಜೆಪಿಯ ಕಾರ್ಯಕರ್ತರು ಈ ಕಾರ್ಯವನ್ನು ಯಶಸ್ವಿಗೊಳಿಸಿ ಹೆಚ್ಚಿನ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು ಎಂದರು; ಡಾ. ಎಸ್.ಎಚ್. ಶಿವನಗೌಡರ ನೇತೃತ್ವದಲ್ಲಿ ಈ ಕಾರ್ಯಕ್ಕೆ ಮುಂದಾಗಿರುವ ತಂಡದ ಕಾರ್ಯ ಅಭಿನಂದನೀಯ ಎಂದರು.


Spread the love

LEAVE A REPLY

Please enter your comment!
Please enter your name here