ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಣಸ್ವಾಮಿ ಆಗ್ರಹ

0
Spread the love

ಬೆಂಗಳೂರು: ಖರ್ಗೆಯವರ ಟ್ರಸ್ಟ್‌ಗೆ ಭೂಮಿ ನೀಡುವ ವಿಚಾರದಲ್ಲಿ ಲೋಪ ಆಗಿದೆ. ಭೂಮಿ ಮೀಸಲಿಡುವಾಗ ನಿರ್ದಿಷ್ಟ ಉದ್ದೇಶವನ್ನು ಸ್ಪಷ್ಟಪಡಿಸಿರಲಿಲ್ಲ. ಕೆಐಎಡಿಬಿಯಿಂದ ಭೂಮಿ ಹಂಚಿಕೆಯಾದ ಕ್ರಮ ಸರಿಯಲ್ಲ ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಬೀರಿ ಇದನ್ನು ಪಡೆದುಕೊಂಡಿದ್ದಾರೆ.

Advertisement

ಸೈಟು ಹಂಚಿಕೆ ಪ್ರಕ್ರಿಯೆ ಒಂದೇ ತಿಂಗಳಲ್ಲಿ ಮುಗಿದಿದೆ. ಒಂದೇ ಕುಟುಂಬದ ಐವರಿಗೆ ಸೈಟು ಹಂಚಿಕೆ ಆಗಿದೆ. ಹೀಗಾಗಿ ಅಧಿಕಾರ ದುರ್ಬಳಕೆ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಇನ್ನೂ ಈ ವರ್ಷ ಫೆ.5 ರಂದು ಭೂಮಿ ನೀಡಲು ಕೆಐಎಡಿಬಿ ತೀರ್ಮಾನ ಮಾಡಿತ್ತು. ಅದೇ ತಿಂಗಳ 8 ರಂದು ಭೂಮಿ ನೀಡುವ ಪ್ರಕ್ರಿಯೆ ಆರಂಭ ಆಗಿತ್ತು. ಅದಾದ ಬಳಿಕ ಮಾ.5 ರಂದು ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಭೂಮಿ ನೀಡಲು ನಿರ್ಣಯ ಮಾಡಲಾಗಿತ್ತು.

ಮಾ.6 ರಂದು ಭೂಮಿ ಹಂಚಿಕೆಗೆ ಆದೇಶ ನೀಡಲಾಗಿತ್ತು. ಹಂಚಿಕೆ ಮಾಡುವಾಗ ಎಸ್‌ಸಿಗಳಿಗೆ ಕಡಿಮೆ ಭೂಮಿ ನೀಡಲಾಗಿದೆ. ಸಚಿವರು ಸದಸ್ಯರಾಗಿರುವ ಟ್ರಸ್ಟ್‌ಗೆ ಹೆಚ್ಚು ಭೂಮಿ ಕೊಡಲಾಗಿದೆ. ಇಲ್ಲಿ ಅಧಿಕಾರ ದುರ್ಬಳಕೆ ಆಗಿದೆ. ಅದಕ್ಕೆ ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here