ಚಿತ್ರದುರ್ಗ:- ಈದ್ ಮಿಲಾದ್ ಮೆರವಣಿಗೆ ವೇಳೆ ದುಷ್ಕರ್ಮಿಗಳು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಘಟನೆ ಜರುಗಿದೆ.
Advertisement
ಚಿತ್ರದುರ್ಗ ನಗರದ ಗಾಂಧಿ ವೃತ್ತದ ಬಳಿ ಘಟನೆ ನಡೆದಿದ್ದು, ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ.
ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಒಟ್ಟಾರೆ ದಿನದಿಂದ ದಿನಕ್ಕೆ ಕೋಮು ಗಲಭೆ ಪ್ರಕರಣ ಹೆಚ್ಚಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ.