ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿ ಗ್ರಾಮದಲ್ಲಿ ಜೂನ್ 11ರಂದು ಸುರಿದ ಅಪಾರ ಮಳೆಯಿಂದಾಗಿ ಹಾನಿಯಾದ ಪ್ರದೇಶಕ್ಕೆ ಬುಧವಾರ ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ರೈತರ ಮತ್ತು ಗ್ರಾಮಸ್ಥರ ಅಳಲು ಆಲಿಸಿದ ಶಾಸಕರು, ಹಾನಿಗೊಳಗಾದ ರೈತರಿಗೆ ಪರಿಹಾರ ಕಲ್ಪಿಸುವುದು ಮತ್ತು ಮಳೆಯಿಂದ ಉಂಟಾಗಬಹುದಾದ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಸೂಚಿಸಿದರು. ತಾ.ಪಂ ಇಓ ಕೃಷ್ಣಪ್ಪ ಧರ್ಮರ ಸೇರಿದಂತೆ ಕಂದಾಯ, ಕೃಷಿ, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ರೈತರಿದ್ದರು.
Advertisement