HomeIndia Newsಮೋದಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆ ಕಾಯುತ್ತಿದ್ದಾರೆ: ಶರದ್ ಪವಾರ್ ಮೆಚ್ಚುಗೆ

ಮೋದಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆ ಕಾಯುತ್ತಿದ್ದಾರೆ: ಶರದ್ ಪವಾರ್ ಮೆಚ್ಚುಗೆ

For Dai;y Updates Join Our whatsapp Group

Spread the love

ಮುಂಬೈ: ರಾಜಕೀಯವಾಗಿ ಭಿನ್ನಾಭಿಪ್ರಾಯಗಳು ಇದ್ದರೂ ಪ್ರಧಾನಿ ನರೇಂದ್ರ ಮೋದಿ ದೇಶದ ಗೌರವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಪಾಡಲು ಶ್ರಮಿಸುತ್ತಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾಗಿವೆ. ಆದರೆ ದೇಶದ ಗೌರವದ ವಿಚಾರದಲ್ಲಿ ರಾಜಕೀಯವನ್ನು ತರಬಾರದು ಎಂದು ಹೇಳಿದರು. ಪ್ರಧಾನಿ ಮೋದಿ ವಿದೇಶಗಳಲ್ಲಿ ಭಾರತದ ಪ್ರತಿಷ್ಠೆಯನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ಪಿ.ವಿ. ನರಸಿಂಹರಾವ್ ಹಾಗೂ ಮನಮೋಹನ್ ಸಿಂಗ್ ಅವರು ಸಹ ದೇಶದ ಭವಿಷ್ಯ ಮತ್ತು ಗೌರವಕ್ಕೆ ಆದ್ಯತೆ ನೀಡಿದ್ದರು ಎಂದು ಪವಾರ್ ಸ್ಮರಿಸಿದರು. ದೇಶದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡುವ ಅವಕಾಶ ಬಂದಾಗ ಎಲ್ಲರೂ ಒಂದೇ ಉದ್ದೇಶದಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡ ಪವಾರ್, 1958ರಲ್ಲಿ ಬರಾಮತಿಯಿಂದ ಪುಣೆಗೆ ಬಂದ ಅನುಭವ ಹಾಗೂ ಯುವ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ ಸಂದರ್ಭಗಳನ್ನು ಹಂಚಿಕೊಂಡರು. ಇದೇ ವೇಳೆ ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರನ್ನು ಭೇಟಿಯಾದ ಕ್ಷಣವನ್ನೂ ಅವರು ಸ್ಮರಿಸಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ಮಾತನಾಡಿದ ಪವಾರ್, ವಿದೇಶ ಪ್ರವಾಸದ ವೇಳೆ ಭಾರತದ ಗೌರವಕ್ಕೆ ಧಕ್ಕೆಯಾಗುವ ಯಾವುದೇ ವರ್ತನೆಯನ್ನು ಅವರು ಒಪ್ಪಿಕೊಳ್ಳುತ್ತಿರಲಿಲ್ಲ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!