‘ಕೈ’ ನಾಯಕರ ಮೇಲಿನ ಇಡಿ ದಾಳಿಯಲ್ಲಿ ಮೋದಿ ಸಕ್ಸಸ್.. ದೇಶದ ಭದ್ರತೆ, ರೈತರ ವಿಚಾರದಲ್ಲಿ ಫೇಲ್- ಪ್ರದೀಪ್ ಈಶ್ವರ್ ವ್ಯಂಗ್ಯ!

0
Spread the love

ಬೆಂಗಳೂರು:- ಕಾಂಗ್ರೆಸ್ ನಾಯಕರ ಮೇಲಿನ ಇಡಿ ದಾಳಿಯಲ್ಲಿ ಸಕ್ಸಸ್ ಕಂಡಿರುವ ಮೋದಿ, ದೇಶದ ಭದ್ರತೆ, ರೈತರ ವಿಚಾರದಲ್ಲಿ ಫೇಲ್ ಆಗಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.

Advertisement

ಮೋದಿ ಸರ್ಕಾರಕ್ಕೆ 11 ವರ್ಷ ಪೂರ್ಣಗೊಂಡ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 11 ವರ್ಷಗಳಲ್ಲಿ ಮೋದಿಯವರು ಸಾಧನೆಗಳನ್ನು ಕಡಿದು ಕಟ್ಟೆ ಹಾಕಿದ್ದಾರೆ. ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರ. ಟ್ರ್ಯಾಕ್ಟರ್‌ ಮೇಲೆ 12% ಜಿಎಸ್‌ಟಿ, ಟೈರ್‌ಗೆ 18% ಜಿಎಸ್‌ಟಿ, ಟ್ರ್ಯಾಕ್ಟರ್‌ ಬಿಡಿ ಭಾಗಗಳ ಮೇಲೆ 28% ಜಿಎಸ್‌ಟಿ ಹಾಕ್ತಿದ್ದಾರೆ ಇದು ಅವರ ಸಾಧನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಗಡೀಪಾರಿಗೆ ಗೃಹ ಇಲಾಖೆ ತಯಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ಲೆವಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ. ಇವರ ಬಗ್ಗೆ ಮಾತ್ರ ನಾನು ಮಾತಾಡ್ತೇನೆ, ಇದು ನನ್ನ ಲೆವೆಲ್. ಚಕ್ರವರ್ತಿ ಸೂಲಿಬೆಲೆ ನನ್ ಲೆವೆಲ್ ಅಲ್ಲ. ಚಕ್ರವರ್ತಿ ಬಗ್ಗೆ ನಮ್ಮ ಕಾರ್ಯಕರ್ತರು ಮಾತಾಡ್ತಾರೆ. ನಾನು ಮಾತಾಡಲ್ಲ ಅವ್ರು ನನ್ನ ಲೆವೆಲ್ ನಲ್ಲಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here