ಬೆಂಗಳೂರು:- DCM ಡಿಕೆಶಿ ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬ ವೀರಪ್ಪ ಮೊಯ್ಲಿ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬೇರೆ ಅವರು ಮಾತನಾಡಿದರೆ ನಾನೇನು ಮಾತನಾಡಲಿ. ನಾನು ಹೈಕಮಾಂಡ್ ನಿರ್ದೇಶನದಂತೆ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು.
ಗುತ್ತಿಗೆದಾರರಿಗೆ ಏಪ್ರಿಲ್ನಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದೇನೆ. 30 ಸಾವಿರ ಕೋಟಿ ರೂ. ಬಾಕಿ ಇದೆ. 15 ಸಾವಿರ ಕೋಟಿ ರೂ. ಕೊಡಬೇಕು ಎಂದು ಹೇಳಿದ್ದಾರೆ. ಆದರೆ ಅಷ್ಟೆಲ್ಲಾ ಕೊಡಲು ಆಗುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕೊಡುತ್ತೇವೆ ಎಂದರು.