ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ. ಸೋಲಿನ ಹೊಣೆ ನಾನೇ ಹೊರುವೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಪಕ್ಷದ ಪರವಾಗಿ ದುಡಿದ ಕಾರ್ಯಕರ್ತರಿಗೆ ಧನ್ಯವಾದಗಳು.
Advertisement
ಕಾಂಗ್ರೆಸ್ ಹಣ ಹಂಚಿಕೆ ಮಾಡದೆ ಇದ್ರೆ ಗೆದ್ದುತ್ತಿದ್ದೆ. ಸಿಎಂ ಅವರ ಕಾರ್ಯಕ್ರಮಕ್ಕೆ 500 ರೂಪಾಯಿ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಇದು ನಮಗೆ ಪೆಟ್ಟು ಕೊಟ್ಟಿತು. ನನ್ನ ಸೋಲನ್ನು ಯಾರ ಮೇಲೂ ಹಾಕಲ್ಲ. ನನ್ನ ಸೋಲನ್ನು ನಾನೇ ಒಪ್ಪಿಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ನಾನು ಅಥವಾ ದಿವಕರ್ ಆಗಲಿ ಮತ್ತೆ ಸ್ಪರ್ಧೆ ಮಾಡುತ್ತೇವೆ ಎಂದು ಬಂಗಾರು ಹನುಮಂತು ಹೇಳಿದ್ದಾರೆ.