ಮಂಡ್ಯ:– ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಅದರಂತೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕೆಆರ್ಎಸ್ ಆಣೆಕಟ್ಟೆಯಲ್ಲಿ ಒಳಹರಿವು ಹೆಚ್ಚಾಗಿದೆ.
Advertisement
ಕಳೆದ ಹತ್ತು ದಿನಗಳಿಂದ ಕೆಆರ್ಎಸ್ ಡ್ಯಾಂಗೆ 2 ಸಾವಿರ ಕ್ಯೂಸೆಕ್ ನೀರು ಬರುತ್ತಿತ್ತು. ಸೋಮವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಕೆಆರ್ಎಸ್ ಡ್ಯಾಂಗೆ ಇಂದು 16,936 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಈ ಮೂಲಕ 124.80 ಅಡಿ ಗರಿಷ್ಠ ಮಟ್ಟದ ಕೆಆರ್ಎಸ್ ಡ್ಯಾಂ 110.95 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಕನ್ನಂಬಾಡಿ ಕಟ್ಟೆಯಲ್ಲಿ 32.686 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಇನ್ನೂ ಡ್ಯಾಂನಿAದ 915 ಕ್ಯೂಸೆಕ್ ಹೊರಹರಿವು ಇದೆ. ಇನ್ನೂ ಮಂಡ್ಯದ ಕೆಲವು ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ.