ತಾಯಿ, ಮಗನ ಜೋಡಿ ಕೊಲೆ ಪ್ರಕರಣ: ಖಾಕಿ ತನಿಖೆಗೆ ಹೆದರಿ ಆರೋಪಿ ನೇಣಿಗೆ ಶರಣು!

0
Spread the love

ಬೆಳಗಾವಿ:- ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಏಪ್ರಿಲ್ 13 ರಂದು ನಡೆದಿದ್ದ ತಾಯಿ-ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಹೆದರಿ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ.

Advertisement

ಹೌದು, ಎಪ್ರಿಲ್ 13 ರಂದು ಚಂದ್ರವ್ವ ಈಚೇರಿ ಹಾಗೂ ವಿಠ್ಠಲ ಈಚೇರಿ ಎಂಬ ತಾಯಿ-ಮಗನನ್ನು ಕೊಲೆ ಮಾಡಿ ಆರೋಪಿಗಳು ಕಬ್ಬಿನ ಕದ್ದೆಯಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದರು. ಹೀಗಾಗಿ ಪೊಲೀಸರ ತನಿಖೆಗೆ ಹೆದರಿ ಶೇಗುನಶಿ ಗ್ರಾಮದ 36 ವರ್ಷದ ಸುರೇಶ ರಾಮಪ್ಪ ಸವದತ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೋರ್ವ ಆರೋಪಿ 35 ವರ್ಷದ ಶ್ರೀಶೈಲ್ ಸಂಗಪ್ಪ ಹೊರಟ್ಟಿ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ.

ಇಬ್ಬರಲ್ಲಿ ಓರ್ವ ಸಾವನ್ನಪ್ಪಿದ್ದರೆ, ಇನ್ನೋರ್ವ ಬಚಾವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here