ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ, ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ನಮ್ಮದಾಗಿದ್ದು, ದೇಶದಲ್ಲಿಯ ಜನತೆಗೆ ಸಂವಿಧಾನವು ಮತದಾನ ಎಂಬ ವಿಶೇಷ ಹಕ್ಕನ್ನು ನೀಡಿದೆ. ಸಂವಿಧಾನ ನೀಡಿದ ಈ ಹಕ್ಕನ್ನು 18 ವರ್ಷ ವಯೋಮಿತಿ ಮೀರಿದ ಎಲ್ಲ ಅರ್ಹ ಮತದಾರರು ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಚಲಾಯಿಸಬೇಕು. ಎಲ್ಲ ಅರ್ಹ ಮತದಾರರು ಚುನಾವಣೆಯ ದಿನ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶ ನಿರ್ಮಿಸೋಣ ಎಂದರು.
ಕೃಷಿ ಇಲಾಖೆಯ ಯಲ್ಲಪ್ಪ ಬಂಗಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.