ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ..! ವಧು ಇವರೇ ನೋಡಿ

0
Spread the love

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೌದು ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಸಿವಶ್ರೀ ಹಾಗೂ ತೇಜಸ್ವಿ ಸೂರ್ಯ ಕುಟುಂಬದ ನಡುವೆ ಮಾತುಕತೆ ಆಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

Advertisement

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ. ಸಿವಶ್ರೀ ಸ್ಕಂದ ಪ್ರಸಾದ್ ಅವರು ಗಾಯಕಿ ಆಗಿದ್ದು ಉತ್ತಮವಾಗಿ ಹಾಡುಗಳನ್ನು ಹಾಡುತ್ತಾರೆ. ಸದ್ಯ ಇವರ ವಿವಾಹವು ಮಾತುಕತೆ ಹಂತದಲ್ಲಿದ್ದು, ಶೀಘ್ರದಲ್ಲೇ ಎಲ್ಲವು ತೀರ್ಮಾನ ಆಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here