MP ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಅರೆಸ್ಟ್!

0
Spread the love

ಬೆಂಗಳೂರು:- ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ-ಕೋಟಿ ಹಣ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನನ್ನು ಅರೆಸ್ಟ್ ಮಾಡಲಾಗಿದೆ.

Advertisement

ಗೋಪಾಲ್​ ಜೋಶಿ ಬಂಧಿತ ಆರೋಪಿ. ಈತನನ್ನು ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.

ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್​ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.

ಸುನೀತಾ ಚೌಹಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಗೋಪಾಲ್‌ ಜೋಶಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಹಾಜರಾಗುವಂತೆ ಸೂಚನೆ ಹಿನ್ನಲೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಗೆ ಸುನೀತಾ ಚೌಹಾಣ್​ ಆಗಮಿಸಿದ್ದರು.

ಬಳಿಕ ಅವರನ್ನು ಸ್ಥಳ ಮಹಜರಿಗಾಗಿ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಎಸಿಪಿ ಚಂದನ್​ರೊಂದಿಗೆ ಅಶೋಕನಗರ ಪೊಲೀಸರ ತಂಡದಿಂದ ಗೋಪಾಲ್ ಜೋಶಿ ನಿವಾಸದಲ್ಲಿ ಪಂಚನಾಮೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here