ನವದೆಹಲಿ:- MP ಟಿಕೆಟ್ ಕೊಡಿಸುವುದಾಗಿ ಕೋಟಿ-ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುಟುಂಬದ ಮೇಲೆ ಬಂದಿರುವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ, ಸಹೋದರಿ ಸೇರಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದೇ ವಿಚಾರವಾಗಿ ಮಾತನಾಡಿದ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎನ್ನುತ್ತಿದ್ದಾರೆ. ನನಗೆ ಯಾರೂ ಸಹೋದರಿಯರು ಇಲ್ಲ. ಗೋಪಾಲ್ ಜೋಷಿ ನಮ್ಮ ಸಹೋದರ ನಾನು ಗೋಪಾಲ್ ಜೋಷಿ ಬೇರೆಯಾಗಿ 35 ವರ್ಷ ಆಗಿದೆ. ನನ್ನ ಹಾಗೂ ಗೋಪಾಲ್ ಜೋಷಿ ಮಧ್ಯೆ ಯಾವುದೆ ವ್ಯವಹಾರ ಇಲ್ಲ. ಯಾರು ಹಣ ಪಡೆದಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸ್ಪಷ್ಟಪಡಿಸಿದರು.
ನಿನ್ನೆ ನನ್ನ ಸಹೋದರ ನನ್ನ ಮೇಲೆ ಎಫ್ಐಆರ್ ಆಗಿದ್ದು, ಇಂದು ಕಾಂಗ್ರೆಸ್ ನವರು ಪ್ರತಿಭಟನೆ ಮಾಡಿದ್ದಾರೆ. ನನಗೆ ಸಹೋದರಿ ಇದ್ದಾರೆ ಎನ್ನುತ್ತಿದ್ದಾರೆ. ನನಗೆ ಯಾರೂ ಸಹೋದರಿಯರು ಇಲ್ಲ. ನಾವು ನಾಲ್ಕು ಸಹೋದರರು. ಒಬ್ಬ ಸಹೋದರ ತೀರಿ ಹೋಗಿದ್ದಾರೆ. ಗೋಪಾಲ್ ಜೋಷಿ ನಮ್ಮ ಸಹೋದರ. ನಾನು ಗೋಪಾಲ್ ಜೋಷಿ ಬೇರೆಯಾಗಿ 35 ವರ್ಷ ಆಗಿದೆ.
ದುರ್ದೈವದಿಂದ ಅವರ ಮೇಲೆ ಹಿಂದೆಯೂ ಆರೋಪ ಬಂದಿತ್ತು. ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಇಂತಹದ್ದೆ ವಿಚಾರ ಬಂದಿತ್ತು. ನನ್ನ ಸಹೋದರನೊಂದಿಗೆ ನನ್ನ ಹೆಸರು ತಳುಕು ಹಾಕಲಾಗುತ್ತೆ. ನನ್ನ ಸಹೋದರನ ಜೊತೆ ನನ್ನ ಹೆಸರು ತಳುಕು ಹಾಕದಂತೆ ಕೋರ್ಟ್ ನಿಂದ ತಡೆ ತರಲಾಗಿದೆ. ನನ್ನ ಹಾಗೂ ಗೋಪಾಲ್ ಜೋಷಿ ಮಧ್ಯೆ ಯಾವುದೆ ವ್ಯವಹಾರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.