ತಮ್ಮ ಅವಧಿಯ ರಾಜಕೀಯ ನೆನೆದು ಭಾವುಕರಾದ ಶ್ರೀ ರಾಮುಲು

0
Spread the love

ಬಳ್ಳಾರಿ:- ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಚಿವ ಶ್ರೀ ರಾಮುಲು ಹೇಳಿದ್ದಾರೆ.

Advertisement

ಮಗಳ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಕೌಲ್ ಬಜಾರ್ ಗೆ ಬಂದಂತ ಸಮಯದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು, ಅಭಿಮಾನಿಗಳು ಧೃತಿಗೇಡಬೇಡಿ, ರಾಜಕೀಯದಲ್ಲಿ ಸೋಲು- ಗೆಲು ಸಾಮಾನ್ಯ ಎಂದರು.

ಕಾರ್ಯಕರ್ತರಿಗೆ ಯಾವುದೇ ತೊಂದರೆಯಾದರೆ ಸಹಿಸುವ ಮಾತೆ ಇಲ್ಲ, ರಾಜಕೀಯ ನಾಯಕರಿಗೆ ಜೀವಾಳವೇ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಅವರಿಗೆ ತೊಂದರೆಯಾದರೆ ಮೌನವಹಿಸುವ ಜಾಯಮಾನ ನನ್ನದಲ್ಲ, ಹಿಂದಿನ ಅವರ ಅವಧಿಯ ರಾಜಕೀಯ ನೆನೆದು ರಾಮುಲು ಭಾವುಕರಾಗಿದ್ದಾರೆ.

ರಾಜಕೀಯದಲ್ಲಿ ಯಾರಿಗೂ ಅಧಿಕಾರ ಶಾಶ್ವತವಲ್ಲ ಎಂದು ಮಗಳ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಕೌಲ್ ಬಜಾರ್ ಗೆ ಬಂದಂತ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ.

ನೆರದಿರುವ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಸಿಗಳನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

ಇನ್ನೂ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಂದ ಅಭಯದ ಮಾತುಗಳು ಕೇಳಿ ಕಾರ್ಯಕರ್ತರು ಸಂತಸಗೊಂಡರು.


Spread the love

LEAVE A REPLY

Please enter your comment!
Please enter your name here