ಕೊಪ್ಪಳ:- ಜಿಲ್ಲೆಯಲ್ಲಿ ಹೃದಯಾಘಾತದ ಮರಣ ಮೃದಂಗ ಆವರಿಸಿದ್ದು, ರಸ್ತೆಯಲ್ಲಿಯೇ ಕುಸಿದು ರಂಗಭೂಮಿ ಕಲಾವಿದ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಈ ಘಟನೆ ಜರುಗಿದೆ. ರಂಗಭೂಮಿ ಕಲಾವಿದ ನಿಂಗನಗೌಡ (65 )ಸಾವನ್ನಪ್ಪಿರುವ ಮೃತ ದುರ್ದೈವಿ.
ಗ್ರಾಮದಲ್ಲಿ ಓಡಾಡುವಾಗ ನಿಂಗನಗೌಡಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಗ್ರಾಮದ ರಸ್ತೆ ಪಕ್ಕ ಮಲಗಿ ಸುಧಾರಿಸಿಕೊಂಡು ಮನೆಗೆ ತೆರಳಿದ್ದಾರೆ. ಮನೆಗೆ ತೆರಳುತ್ತಿದ್ದಂತೆಯೇ ಕುಸಿದು ಸಾವನ್ನಪ್ಪಿದ್ದಾರೆ. ಇನ್ನೂ ನಿಂಗನಗೌಡ ಎದೆ ನೋವಿನಿಂದ ಪರದಾಡಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.