HomeKarnataka Newsಕೊಪ್ಪಳದಲ್ಲಿ ಹೃದಯಾಘಾತದ ಮರಣ ಮೃದಂಗ: ರಸ್ತೆಯಲ್ಲೇ ಕುಸಿದು ರಂಗಭೂಮಿ ಕಲಾವಿದ ಸಾವು!

ಕೊಪ್ಪಳದಲ್ಲಿ ಹೃದಯಾಘಾತದ ಮರಣ ಮೃದಂಗ: ರಸ್ತೆಯಲ್ಲೇ ಕುಸಿದು ರಂಗಭೂಮಿ ಕಲಾವಿದ ಸಾವು!

For Dai;y Updates Join Our whatsapp Group

ಕೊಪ್ಪಳ:- ಜಿಲ್ಲೆಯಲ್ಲಿ ಹೃದಯಾಘಾತದ ಮರಣ ಮೃದಂಗ ಆವರಿಸಿದ್ದು, ರಸ್ತೆಯಲ್ಲಿಯೇ ಕುಸಿದು ರಂಗಭೂಮಿ ಕಲಾವಿದ ಸಾವನ್ನಪ್ಪಿರುವ ಘಟನೆ ಜರುಗಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಈ ಘಟನೆ ಜರುಗಿದೆ. ರಂಗಭೂಮಿ ಕಲಾವಿದ ನಿಂಗನಗೌಡ (65 )ಸಾವನ್ನಪ್ಪಿರುವ ಮೃತ ದುರ್ದೈವಿ.

ಗ್ರಾಮದಲ್ಲಿ ಓಡಾಡುವಾಗ ನಿಂಗನಗೌಡಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಗ್ರಾಮದ ರಸ್ತೆ ಪಕ್ಕ ಮಲಗಿ ಸುಧಾರಿಸಿಕೊಂಡು ಮನೆಗೆ ತೆರಳಿದ್ದಾರೆ. ಮನೆಗೆ ತೆರಳುತ್ತಿದ್ದಂತೆಯೇ ಕುಸಿದು ಸಾವನ್ನಪ್ಪಿದ್ದಾರೆ. ಇನ್ನೂ ನಿಂಗನಗೌಡ ಎದೆ ನೋವಿನಿಂದ ಪರದಾಡಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇನ್ನೂ ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img