MUDA Case: ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಬಿಗ್‌ ರಿಲೀಫ್! ಸ್ನೇಹಮಯಿ ಕೃಷ್ಣಗೆ ನೋಟಿಸ್

0
Spread the love

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್​ ಸಂಬಂಧ ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ. ಹೌದು ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು,

Advertisement

ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ.

ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನು ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್​ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ  ಈ  ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here