ಮುಡಾ ಕೇಸ್​: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ!

0
Spread the love

ಬೆಂಗಳೂರು:- ಮುಡಾ ಕೇಸ್​ ಗೆ ಸಂಬಧಪಟ್ಟಂತೆ ಸಿಎಂ ಸಿದ್ದರಾಮಯ್ಯರ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

Advertisement

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ, ಸೆಪ್ಟೆಂಬರ್ 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ಇತ್ತ ತೆರೆಮರೆಯಲ್ಲಿ ಒಂದಷ್ಟು ಚಟುವಟಿಕೆಗಳು ಕಾಂಗ್ರೆಸ್​ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ.

ಸಿಎಂ ಮುಡಾ ಮುಳ್ಳಲ್ಲಿ ಸಿಲುಕಿ ಒದ್ದಾಡ್ತಿರುವಾಗ ಆಪ್ತರೇ ತಮ್ಮ ಕುರ್ಚಿ ಕಸಿದುಕೊಳ್ಳುವ ಬಗ್ಗೆ ಮಾತಾಡ್ತಿದ್ದಾರೆ. ಆಪ್ತರಲ್ಲೇ ಸಿಎಂ ಗಾದಿ ಬಗ್ಗೆ ಕಿತ್ತಾಟಗಳು ಜೋರಾಗಿವೆ. ಮುಂದಿನ ಸಿಎಂ ನಾನೇ ಎಂದು ಟವೆಲ್ ಹಾಕಿ ಕೂತಿದ್ದಾರೆ. ಅದರಲ್ಲೂ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಮಾಡ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.


Spread the love

LEAVE A REPLY

Please enter your comment!
Please enter your name here