ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಹೀಗಾಗಿ ಇಂದು ಮುಡಾ ಸೈಟ್ನಲ್ಲಿ ಫೈನಲ್ ಮ್ಯಾಚ್ ಇದೆ. ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಮುಗಿದು ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ.
ರಾಜ್ಯ ರಾಜಕಾರಣ ಸದ್ಯ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಮುಡಾ ಕೇಸ್ ಏನಾಗಲಿದೆ ಅನ್ನೋದು ಕೆಲವೇ ಘಂಟೆಗಳಲ್ಲಿ ನಿರ್ಧಾರ ಆಗಲಿದೆ. ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾ. ನಾಗಪ್ರಸನ್ನ ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಅಂತ ಅರ್ಜಿದಾರರಿಗೆ ಮೌಖಿಕವಾಗಿ ತಿಳಿಸಿದ್ದರು. ಹೀಗಾಗಿ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ತೀರ್ಮಾನ ಆಗಲಿದೆ.
ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸುಪ್ರೀಂಕೋರ್ಟ್ನ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಮ್ಮ ಅಂತಿಮ ವಾದ ಮಂಡಿಸಲಿದ್ದಾರೆ. ಈ ವಾದ ಸರಣಿಯ ಮೇಲೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿಂತಿದೆ.