Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಕೊಟ್ಟ ಮುಡಾ ದೂರುದಾರ!

0
Spread the love

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Advertisement

ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಪತ್ನಿಗೆ ಅಕ್ರಮವಾಗಿ ಸೈಟ್‌ ಹಂಚಿಕೆ ಮಾಡಿದ್ದಾರೆ ಅನ್ನೋ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣ ಸಂಬಂಧ ನಿನ್ನೆಯಷ್ಟೇ ಸಿಎಂ ಹಾಗೂ ಪತ್ನಿ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಇಂದು ಹಾಗೂ ನಾಳೆ ರಜೆ ಇರೋದ್ರಿಂದ ಸೋಮವಾರದಿಂದ ತನಿಖೆ ಆರಂಭ ಆಗೋ ಸಾಧ್ಯತೆ ಇದೆ.


Spread the love

LEAVE A REPLY

Please enter your comment!
Please enter your name here