BREAKING.. ಮುಡಾ ಹಗರಣ: ಸಚಿವ ಬೈರತಿ ಸುರೇಶ್ʼಗೆ ಇಡಿ‌ ನೋಟಿಸ್

0
Spread the love

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಯಲ್ಲಿ ಇಸಿಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ಪತ್ನಿ 14 ಸೈಟ್​ಗಳನ್ನು ವಾಪಸ್ ಮುಡಾಗೆ ಕೊಟ್ಟಿದ್ದಾರೆ. ಹೀಗರುವಾಗಲೇ ಮುಡಾ ಹಗರಣ ಸಂಬಂಧ ಸಚಿವ ಬೈರತಿ ಸುರೇಶ್ ಗೆ ಇಡಿ‌ ನೋಟಿಸ್ ನೀಡಿದ್ದು  ಇಂದು ಬೆಳಗ್ಗೆ ಹೆಬ್ಬಾಳದ ಮನೆಗೆ ತೆರಳಿ ನೋಟಿಸ್ ನೀಡಲಾಗಿದೆ.

Advertisement

ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದ್ದು, ನವರಾತ್ರಿ ನಂತರ ವಿಚಾರಣೆಗೆ ಸಚಿವ ಬೈರತಿ ಸುರೇಶ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here