HomeBengaluru NewsMuda Scam: ಇಂದು ಕೋರ್ಟ್ ನಲ್ಲಿ ಸಿದ್ದು ಭವಿಷ್ಯ ನಿರ್ಧಾರ!

Muda Scam: ಇಂದು ಕೋರ್ಟ್ ನಲ್ಲಿ ಸಿದ್ದು ಭವಿಷ್ಯ ನಿರ್ಧಾರ!

For Dai;y Updates Join Our whatsapp Group

Spread the love

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪು ಇಂದು ಹೊರ ಬೀಳಲಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ಬಗ್ಗೆ ಇಂದು ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ಇಂದು ಅರ್ಜಿಯ ವಿಚಾರಣೆ ನಡೆಯಲಿದೆ. ಸಿದ್ದರಾಮಯ್ಯ ಪರವಾಗಿ ಗುರುವಾರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

ಇಂದು ಪ್ರತಿವಾದಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಕೇಂದ್ರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಪ್ರದೀಪ್ ಪರವಾಗಿ ಪ್ರಭುಲಿಂದ ನಾವದಗಿ, ಸ್ನೇಹಮಯಿ ಕೃಷ್ಣ ಪರವಾಗಿ ಲಕ್ಷ್ಮೀ ಐಯ್ಯಂಗಾರ್ ಮತ್ತು ಟಿ ಜೆ ಅಬ್ರಾಹಂ ಪರವಾಗಿ ರಂಗನಾಥ ರೆಡ್ಡಿ ವಾದ ಮಂಡಿಸಲಿದ್ದಾರೆ.

ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತ್ತು. ಗುರುವಾರ ಎರಡೂ ಕಡೆ ವಾದ ಆಲಿಸಿದ ನ್ಯಾಯಾದೀಶ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನ ಆಗಸ್ಟ್​ 31ಕ್ಕೆ ಮುಂದೂಡಿದರು. ಅದರಂತೆ ಇಂದು ವಿಚಾರಣೆ ನಡೆಯಲಿದೆ. ಈ ಮೂಲಕ ಸಿದ್ದರಾಮಯ್ಯರ ಭವಿಷ್ಯ ಇಂದೇ ನಿರ್ಧಾರ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!