ಬಹುಕೋಟಿ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ವರ್ಗಾವಣೆ

0
Spread the love

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಐಶ್ವರ್ಯಾ ಗೌಡ ವಿರುದ್ದ ಬೆಂಗಳೂರಿನ ಕೆಲ ಪೊಲೀಸ್ ಠಾಣೆಯಲ್ಲಿ ವಂಚನೆ ಕೇಸ್ದಾಖಲಾಗಿತ್ತು.

Advertisement

ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಕೆಲ ಕಡೆ ಕೇಸ್ ದಾಖಲಿಸಲಾಗಿದೆ. ಇದೀಗ ಎಲ್ಲಾ ಕೇಸ್ ಫೈಲ್ಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಲಿದ್ದಾರೆ. ಸಿಐಡಿಯ ಆರ್ಥಿಕ ಅಪರಾಧ ವಿಭಾಗ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಿದೆ.

ಈಗಾಗಲೇ ಬ್ಯಾಟರಾನಪುರ ಉಪವಿಭಾಗ ಎಸಿಪಿ ಭರತ್ ರೆಡ್ಡಿ ಕೇಸ್ ತನಿಖೆ ನಡೆಸಿದ್ರು. ಪ್ರಕರಣದ ಮುಂದಿನ ತನಿಖೆಗೆಗೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ನಿನ್ನೆಯಷ್ಟೇ ಐಶ್ವರ್ಯಾ ಗೌಡ ಸೆಷನ್ಸ್ ಕೋರ್ಟ್ ನಿಂದ ಜಾಮೀನು ಪಡೆದಿದ್ರು. ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ವಾರಾಹಿ ವರ್ಲ್ಡ್ಆಫ್ಗೋಲ್ಡ್ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


Spread the love

LEAVE A REPLY

Please enter your comment!
Please enter your name here