ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಅಂತರ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಿನಾಂಕ 18/03/2026 ರಂದು ದಾಖಲಾಗಿದ್ದ ಗುನ್ನಾ ಸಂಖ್ಯೆ 50/2026, ಕಲಂ 303(2) ಬಿ.ಎನ್.ಎಸ್-2023 ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರ ನಿರ್ದೇಶನದಂತೆ ವಿಶೇಷ ತಂಡವನ್ನು ರಚಿಸಲಾಗಿತ್ತು. ನರಗುಂದ ಉಪವಿಭಾಗದ ಡಿ.ಎಸ್.ಪಿ ಪ್ರಭುಗೌಡ ಕಿರೇದಳ್ಳಿ ಅವರ ಮಾರ್ಗದರ್ಶನದಲ್ಲಿ ಮುಂಡರಗಿ ಠಾಣೆಯ ಸಬ್ ಇನ್ಸಪೆಕ್ಟರ್ಗಳಾದ ಚನ್ನಯ್ಯ ದೇವೂರ, ಬಿ.ಎನ್. ಯಳವತ್ತಿ ಕಾರ್ಯಾಚರಣೆ ನಡೆಸಿದರು.
ದಿನಾಂಕ 20/03/2026 ರಂದು ಮುಂಡರಗಿ ಪಟ್ಟಣದ ಗೋಂದಳಿ ಓಣಿಯ ಕಾರ್ ಡ್ರೈವರ್ ರವಿ ತಂದೆ ಪರಶುರಾಮ ಕುಕನೂರು (34) ಎಂಬಾತನನ್ನು ಬಂಧಿಸಲಾಯಿತು. ವಿಚಾರಣೆ ವೇಳೆ ಆತ ಮುಂಡರಗಿ, ಕೊಪ್ಪಳ ಹಾಗೂ ಗದಗ ನಗರ ಪ್ರದೇಶಗಳಲ್ಲಿ ಒಟ್ಟು 7 ಮೋಟಾರ್ ಸೈಕಲ್ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಬಂಧಿತನಿಂದ ಸುಮಾರು ₹2.05 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 7 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಗಳಾದ ಜೆ.ಐ ಬಚ್ಚೇರಿ, ಅಶೋಕ ಬೂದಿಹಾಳ, ಮಂಜುನಾಥ ಅಗಸಿಮನಿ, ಮಹೇಶ ಗೊಳಗೊಳಕಿ, ವಿನಾಯಕ ಬಾಲರಡ್ಡಿ, ನಾಗರಾಜ ಹರಪನಹಳ್ಳಿ, ಶರಣಪ್ಪ ಓಜನಹಳ್ಳಿ, ನಿಂಗಪ್ಪ ಪೂಜಾರ ಹಾಗೂ ಪರಶುರಾಮ ಧಾರವಾಡ ಅವರ ಶ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಪ್ರಶಂಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.



