ಪರಪ್ಪನ ಅಗ್ರಹಾರ ಜೈಲಿನಿಂದ ಮುನಿರತ್ನ ಬಿಡುಗುಡೆ: ಕಾರಿನಲ್ಲಿ ಮನೆಗೆ ತೆರಳಿದ ಶಾಸಕ

0
Spread the love

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರು ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಒಂದು ತಿಂಗಳ ಹಿಂದೆಯೇ ಬಂಧನಕ್ಕೆ ಒಳಗಾಗಿದ್ದ ಮುನಿರತ್ನ ವಿರುದ್ದ ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ದೂರು ದಾಖಲಾಗಿತ್ತು.

Advertisement

ಇನ್ನೂ ಜಾಮೀನು ಸಿಕ್ಕಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡಗುಡೆ ಆಗಿದ್ದಾರೆ. ನಿನ್ನೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ತಲುಪಿತ್ತು. ಹೀಗಾಗಿ ನಿನ್ನೆ ಬಿಡುಗಡೆ ಆಗಿರಲಿಲ್ಲ. ಇಂದು ಬಿಡುಗಡೆಯಾಗುತ್ತಿದ್ದಂತೆ ಕಾರಿನಲ್ಲಿ ತಮ್ಮ ಮನೆಗೆ ಶಾಸಕ ಮುನಿರತ್ನ ತೆರಳಿದ್ದಾರೆ. ಸದ್ಯ ಮುನಿರತ್ನ ಬಿಡುಗಡೆ ಹಿನ್ನಲೆ ವೈಯಾಲಿಕಾವಲ್ ನಿವಾಸದ ಬಳಿ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here