ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು!

0
Spread the love

ಬೆಂಗಳೂರು:- ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ಜರುಗಿದೆ. ಗುಂಡೇಟು ತಿಂದ ಆರೋಪಿಗಳನ್ನು ದೀಪು (28), ಅರುಣ್ (27) ಎಂದು ಗುರುತಿಸಲಾಗಿದೆ.

Advertisement

ಆರೋಪಿಗಳು ಜೂ. 14 ರಂದು ಯುವಕ ವಿಜಯ್ (26) ಎಂಬುವರನ್ನು ಮಾತುಕತೆಗೆ ಅಂತ ಜೆ.ಜೆ.ನಗರದ ಜನತಾ ಕಾಲೋನಿಗೆ ಕರೆಸಿ ಕೊಲೆ ಮಾಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆರೋಪಿಗಳು ಆರ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ಅವಿತು ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು.

ಆಗ, ಇನ್ಸ್​ಪೆಕ್ಟರ್ ಕೆಂಪೇಗೌಡ ಗಾಳಿಯಲ್ಲಿ ಗುಂಡು ಹಾರಿಸಿ ವಾರ್ನ್ ಮಾಡಿದ್ದರು. ಆದರೂ ಆರೋಪಿಗಳು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡು ಹೊಡೆದು ಬಂಧಿಸಿದರು. ಗಾಯಾಳು ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here