ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿತ್ತು. ಹೆಂಡತಿ ಯನ್ನು ಕೊಲೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಕೇಶ್ ಕಡೇಕರ್ಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಲಾಗಿದೆ.
ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಬಳಿಕ ರಾಕೇಶ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
ಮಹಾರಾಷ್ಟ್ರ ಮೂಲದ ದಂಪತಿಗಳಾದ ಅನಿಲ್ ಸಾಂಬೇಕರ್ ಮತ್ತು ರಾಕೇಶ್ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಾಸವಾಗಿದ್ದರು. ಆದರೆ ಇದೀಗ ಪತಿ ತನ್ನ ಹೆಂಡತಿಯನ್ನು ಕೊಂದು,
ಆಕೆ ದೇಹ ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿದ್ದಾನೆ. ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಇಟ್ಟಿದ್ದನು. ಬಳಿಕ ಸ್ಥಳಿಯರಿಗೆ ವಾಸನೆ ಬಂದ ಕಾರಣ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಕೃತ್ಯ ಬೆಳಕಿಗೆ ಬಂದಿದೆ.