ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದ ಘಟನೆ ಬೆಳಕಿಗೆ ಬಂದಿದೆ.
ದಲಿತ ಕ್ರಿಶ್ಚಿಯನ್ ಅಪ್ರಾಪ್ತ ಬಾಲಕನು ಮುಸ್ಲಿಂ ಅಪ್ರಾಪ್ತ ಯುವತಿಯೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕೆಲವು ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಘಟನೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ನಡೆದಿದ್ದು, ಬಾಲಕನ ಸಹೋದರ ನೀಡಿದ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 8 ಯುವಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ.
ಈ ಕುರಿತು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಮಾತನಾಡಿ, “ಬಾಲಕ ಮತ್ತು ಬಾಲಕಿ ಇಬ್ಬರೂ ಅಪ್ರಾಪ್ತರು. ಬೈಕ್ನಲ್ಲಿ ತೆರಳುತ್ತಿದ್ದಾಗ ಕೆಲವರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದು, ಮೇಲ್ನೋಟಕ್ಕೆ ಇದು ನೈತಿಕ ಪೊಲೀಸ್ ಗಿರಿಯ ಪ್ರಕರಣವಾಗಿದೆ. ಇಬ್ಬರನ್ನು ಬಂಧಿಸಿದ್ದು, ಉಳಿದವರ ಬಗ್ಗೆ ತನಿಖೆ ಮುಂದುವರಿದಿದೆ ಎಂದರು.
ಬಾಲಕನ ತಾಯಿ ಪಲ್ಲವಿ ಮಾತನಾಡಿ, ಆ ಹುಡುಗಿ ನಮ್ಮ ಮನೆಗೆ ಬರುತ್ತಿರುತ್ತಾಳೆ. ಆರೋಗ್ಯ ಸಮಸ್ಯೆಯಿಂದ ಮನೆಯಲ್ಲಿರಬೇಕೆಂದು ಕೇಳಿದ್ದು, ಬಿಡಲು ಹೋಗುತ್ತಿದ್ದಾಗ ಜ್ಯೋತಿ ಟಾಕೀಸ್ ಬಳಿ 30–40 ಜನ ಅಡ್ಡಗಟ್ಟಿದರು. ಇಬ್ಬರು ಮಾತ್ರ ಹಲ್ಲೆ ಮಾಡಿದ್ದಾರೆ. ನಮ್ಮ ಮಕ್ಕಳಲ್ಲಿ ಯಾವುದೇ ತಪ್ಪಿಲ್ಲ, ಧರ್ಮ ಆಧಾರದಲ್ಲಿ ಪ್ರಶ್ನೆ ಏರ್ಪಟ್ಟಿದೆ ಎಂದರು.
ಒಟ್ಟಾರೆ ಘಟನೆ ಬಗ್ಗೆ ಪ್ರಸ್ತುತ ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎನ್ನಲಾಗಿದೆ.



