HomeGadag Newsಮಠಗಳು ದಾಸೋಹ ಸೇವೆಗೆ ಪ್ರೇರಣೆ: ತಾತನಗೌಡ ಸಿದ್ದನಗೌಡ ಪಾಟೀಲ

ಮಠಗಳು ದಾಸೋಹ ಸೇವೆಗೆ ಪ್ರೇರಣೆ: ತಾತನಗೌಡ ಸಿದ್ದನಗೌಡ ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಾವಿರಾರು ವರ್ಷಗಳ ಇತಿಹಾಸವಿರುವ ಮಠಗಳು ದೇಶದ ಜನರಲ್ಲಿ ಸಂಸ್ಕೃತಿ, ಸಂಸ್ಕಾರ, ಅನ್ನದಾಸೋಹ ಮಾಡಲು ಪ್ರೇರೇಪಿಸುತ್ತಿವೆ. ಸಮಾಜದ ಶಾಂತಿ ಕಾಪಾಡುವಲ್ಲಿ ಮಠಗಳ ಪಾತ್ರ ಪ್ರಮುಖವಾಗಿದ್ದು, ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ತಾತನಗೌಡ ಸಿದ್ದನಗೌಡ ಪಾಟೀಲ ಹೇಳಿದರು.

ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ ಮತ್ತು ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಠಗಳು ಸಮಾಜದಲ್ಲಿ ಎಲ್ಲರನ್ನು ಸರಿದಾರಿಯಲ್ಲಿ ಕರೆದುಕೊಂಡು ಹೋಗುವ ಪವಿತ್ರ ಕೇಂದ್ರಗಳಾಗಿವೆ. ನವರಾತ್ರಿ ವೇಳೆ ನವ ದುರ್ಗೆಯರನ್ನು ಆರಾಧಿಸುವ ಮೂಲಕ ಯುವ ಜನಾಂಗ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಯಶ್ರೀ ತಾತನಗೌಡ ಪಾಟೀಲ, ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿಕಾರ್ಜುನ ಚಂದಪ್ಪನವರ, ಸುನಂದಾ ಚಂದಪ್ಪನವರ, ದತ್ತಾ ಪ್ರಾಪರ್ಟಿ ನಿರ್ದೇಶಕರಾದ ಜಾಹೀರುದ್ದೀನ್ ಬಾಬುಸಾಬ ತಾಡಪತ್ರಿ, ಅತ್ತರಬಾನು ತಾಡಪತ್ರಿ, ಗಣ್ಯ ವ್ಯಾಪಾರಸ್ಥರಾದ ನೇಮಸಾ ಮಲಜಿ ಪಾಲ್ಗೊಂಡಿದ್ದರು.

ಶ್ರೀ ಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷರಾದ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ ಮುಂತಾದ ಗಣ್ಯರು ವೇದಿಕೆಯಲ್ಲಿದ್ದರು.
ಶ್ರೀಅನ್ನಪೂರ್ಣೇಶ್ವರ ಸನ್ನಿಧಿಯಲ್ಲಿ ಡಾ. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಪುರಾಣ ಪ್ರವಚನ ನಡೆಯಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಪಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.

ಪೂಜಾ ಸಮಿತಿ ಅಧ್ಯಕ್ಷರಾದ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ.ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಭಕ್ತಿಸೇವೆ ವಹಿಸಿದ್ದ ಎಂ.ಎಂ. ವಿರಕ್ತಮಠ, ರಾಕೇಶ ದಾಸರಿ, ನಿವೃತ್ತ ಇಂಜಿನಿಯರ್ ಎಸ್.ಎಸ್. ಸಜ್ಜನರ, ನಿವೃತ್ತ ಉಪ ತಹಸೀಲ್ದಾರ ಪಿ.ಟಿ. ನಾರಾಯಣಪುರ, ನಿವೃತ್ತ ಶಿಕ್ಷಕ ಆರ್.ಎಫ್. ಅಗಸಿಮನಿ ಹಾಗೂ ಶಿಕ್ಷಕರಾದ ಎಂ.ಎ. ಜೋಗಿನ ಅವರನ್ನು ಸನ್ಮಾನಿಸಲಾಯಿತು. ರಾಮನಗೌಡ ದಾನಪ್ಪಗೌಡ್ರ ಸ್ವಾಗತಿಸಿದರು. ವಿ.ಎಂ. ಕುಂದ್ರಾಳಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ ಗೊಡಚಿ ವಂದಿಸಿದರು.

ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಶ್ರೀದೇವಿಯ ಪೂಜೆ, ಆರಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ದೇವಸ್ಥಾನದ ಮುಖ್ಯದ್ವಾರಗಳಲ್ಲಿ ಗಂಟೆಗಳನ್ನು ಹಾಕಲಾಗಿರುತ್ತದೆ. ಗಂಟೆಯ ಸಂಕೇತವೇನೆಂದರೆ, ನಮ್ಮ ಕಿವಿಗಳು ಕೇಳಿದ ಕೆಟ್ಟ ವಿಚಾರ, ವಿಷಯಗಳು ಗಂಟೆಯ ಶಬ್ದವನ್ನು ಕೇಳಿದ ತಕ್ಷಣ ನಮ್ಮಿಂದ ತೊಲಗಲಿ ಎಂಬುದಾಗಿದೆ. ಸಮಾಜದಲ್ಲಿ ಎಲ್ಲರೂ ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!