ಚಿಕ್ಕೋಡಿ: ಕಾಂಗ್ರೆಸ್ ಹಿರಿಯ ಶಾಸಕ ಬಿಆರ್ ಪಾಟೀಲ್ ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ಆದರಲ್ಲೂ ಆಡಳಿತರೂಢ ಕಾಂಗ್ರೆಸ್ಗೆ ಇದು ಮುಜುಗರ ಉಂಟು ಮಾಡಿದ್ರೆ,
ಬಿಜೆಪಿಗೆ ಇದು ಅಸ್ತ್ರವಾಗಿದೆ. ಇದರ ಬೆನ್ನಲ್ಲೇ ಬಿ.ಆರ್. ಪಾಟೀಲ್ ಹೇಳಿದಂತೆ ಅದರ ಅಪ್ಪನ ಹಾಗೆ ನನ್ನ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಕಿಡಿಕಾರಿದ್ದಾರೆ. 25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ.
ಎರಡು ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದ್ರೆ ಏನರ್ಥ? ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಮುಖ್ಯಮಂತ್ರಿಗೆ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.