ಪೊಲೀಸರಿಂದ ನನಗೆ ಜೀವಕ್ಕೆ ಅಪಾಯವಿದೆ: CT ರವಿ ಮೊದಲ ಪ್ರತಿಕ್ರಿಯೆ!

0
Spread the love

ಬೆಳಗಾವಿ:- DCM ಡಿಕೆಶಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನೇರವಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ MLC ಸಿ.ಟಿ ರವಿ ಹೇಳಿದ್ದಾರೆ.

Advertisement

ಠಾಣೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸಿಎಂ ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇರವಾಗಿ ಸುವರ್ಣ ಸೌಧ ಸಭಾಂಗಣದಲ್ಲಿ ಬೆದರಿಕೆ ಹಾಕಿದ್ದಾರೆ.

ಪೊಲೀಸರಿಂದ ಜೀವಕ್ಕೆ ಅಪಾಯವಿದೆ. ಅನುಮಾನಾಸ್ಪದವಾಗಿ, ನಿಗೂಢವಾಗಿ ವರ್ತನೆ ಮಾಡುತ್ತಿದ್ದಾರೆ. ಇಲ್ಲಿಗೆ ನಮ್ಮನ್ನು ಯಾಕೆ ಕರೆದುಕೊಂಡು ಬಂದರು ಎಂದು ಹೇಳಿಲ್ಲ. ನನ್ನ ಮೇಲೆ ಯಾವ ಕೇಸ್ ಹಾಕಿದ್ದಾರೆ ಎಂದು ಮಾಹಿತಿ ನೀಡಿಲ್ಲ. ನನ್ನನ್ನು ಪ್ರತ್ಯೇಕವಾಗಿ ಕರೆದುಕೊಂಡು ಬಂದಿದ್ದಾರೆ. ಸುವರ್ಣಸೌಧದಲ್ಲಿ ನನ್ನ ಮೇಲೆ ಕೊಲೆ ಪ್ರಯತ್ನ ನಡೆಯಿತು. ಕೊಲೆ ಪ್ರಯತ್ನದ ಬಗ್ಗೆ ಸಭಾಪತಿಗೂ ದೂರುಕೊಟ್ಟಿದ್ದೇನೆ ಎಂದು ಕಿಡಿಕಾರಿದರು.

ಪೊಲೀಸರಿಗೆ ದೂರು ನೀಡಿದ್ದೇನೆ. ಕಳೆದ 2 ಗಂಟೆಯಿಂದ ಎಫ್‌ಐಆರ್ ಮಾಡಿ ಎಂದು ಒತ್ತಾಯಿಸಿದ್ದೇನೆ. ನಮಗೆ ಎಫ್‌ಐಆರ್ ಕಾಪಿ ನೀಡುತ್ತಿಲ್ಲ. ಪೊಲೀಸರ ನಡೆ ಅನುಮಾನಸ್ಪದವಾಗಿದೆ. ಇವರದು ಹಿಡನ್ ಅಜೆಂಡಾ ಇದ್ದ ಹಾಗೆ ಕಾಣುತ್ತಿದೆ. ಇದರ ಹಿಂದಿನ ದುರುದ್ದೇಶ ನನಗೆ ತಿಳಿಯುತ್ತಿಲ್ಲಾ. ಸಭಾಪತಿ ಅವರು ರೋಲಿಂಗ್ ಕೊಟ್ಟ ಮೇಲೆ ಇವರು ಯಾವ ಕಾರಣಕ್ಕೆ ಎಫ್‌ಐಆರ್ ಹಾಕಿದ್ದಾರೆ ಹೇಳಬೇಕು. ಏನೇ ಇರಲಿ ಅವರು ಮೊದಲು ನನಗೆ ಹೇಳಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here