ನನ್ನ ಹೋರಾಟ ನಿರಂತರ, ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ: HD ದೇವೇಗೌಡ!

0
Spread the love

ಚಿಕ್ಕಬಳ್ಳಾಪುರ:- ನನ್ನ ಹೋರಾಟ ನಿರಂತರ, ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ ಎಂದು ಮಾಜಿ ಪ್ರಧಾನಿ HD ದೇವೇಗೌಡ ಹೇಳಿದ್ದಾರೆ.

Advertisement

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ನಾನು ರೈತನ ಮಗ, ನನ್ನ ಕೊನೆ ಉಸಿರು ಹೋಗುವವರೆಗೂ, ನನ್ನ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ. ನಾನು ಕುಳಿತುಕೊಳ್ಳುವ ವ್ಯಕ್ತಿಯಲ್ಲ. ನಾನು ಯಾರ ಬಗ್ಗೆಯೂ ಮಾತನಾಡಲ್ಲ ಎಂದಿದ್ದಾರೆ.

ಯಾವುದೆ ಪಕ್ಷ ಯಾವುದೇ ಜಾತಿ ನಾಯಕರು ಇದ್ರೂ ಲಘುವಾಗಿ ಮಾತನಾಡಿಲ್ಲ. ನನ್ನ ಉಸಿರು ಇರುವಾಗಲೇ ರಾಜ್ಯಕ್ಕೆ ಏನಾದ್ರೂ ಒಳ್ಳೆಯದು ಮಾಡಬೇಕು. ಕೆಂಪು ಕೋಟೆಯ ಮೇಲೆ ಒಂದು ಸಲ ಬಾವುಟ ಹಾರಿಸಿದ್ದೇನೆ ಅಂತ ಶ್ರೀಗಳು ಹೇಳ್ತಿದ್ರು. ನನ್ನ ಶಕ್ತಿ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಆಗಿದ್ರು ಎಂದಿದ್ದಾರೆ.

ನನ್ನ ಜನರಿಗಾಗಿ ಪಾರ್ಲಿಮೆಂಟ್‌ನಲ್ಲಿ ಹೋರಾಟ ಮಾಡುವ ಶಕ್ತಿ ಕೊಡು ಎಂದು ಕುಲದೇವರು ಈಶ್ವರನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here