ಮೈಸೂರು: ಕಳೆದ ವರ್ಷ ಗಲಭೆಯಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಆತಂಕಕಾರಿ ಘಟನೆ ನಡೆದಿದೆ.
ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಕ್ರಿಕೆಟ್ ಆಟದ ವಿಚಾರವಾಗಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ ಹಾಗೂ ಅಜೀಜ್ ನಡುವೆ ಮಾರಾಮಾರಿ ನಡೆದಿದೆ. ಮಾರಾಮಾರಿ ವೇಳೆ ಲಾಂಗ್ ಮತ್ತು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ ಘಟನೆ ಸಾರ್ವಜನಿಕರಲ್ಲಿ ಭೀತಿಗೆ ಕಾರಣವಾಗಿದೆ.
ಭಾನುವಾರ ನಡೆದ ಈ ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮರಾಗಳಲ್ಲಿ ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



