HomeEntertainmentಮೈಸೂರು ಸ್ಯಾಂಡಲ್ ಸೋಪ್‌ಗೆ ನವ ರೂಪ: ಕೆಎಸ್‌ಡಿಎಲ್ ಉತ್ಪನ್ನಗಳಿಗೆ ತಮನ್ನಾ ಭಾಟಿಯಾ ಬ್ರ್ಯಾಂಡ್ ಅಂಬಾಸಿಡರ್

ಮೈಸೂರು ಸ್ಯಾಂಡಲ್ ಸೋಪ್‌ಗೆ ನವ ರೂಪ: ಕೆಎಸ್‌ಡಿಎಲ್ ಉತ್ಪನ್ನಗಳಿಗೆ ತಮನ್ನಾ ಭಾಟಿಯಾ ಬ್ರ್ಯಾಂಡ್ ಅಂಬಾಸಿಡರ್

For Dai;y Updates Join Our whatsapp Group

Spread the love

ಬೆಂಗಳೂರು: ಶತಮಾನಕ್ಕೂ ಮೀರಿದ ಭವ್ಯ ಪರಂಪರೆ ಹೊಂದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ–ಕೆಎಸ್‌ಡಿಎಲ್ ಸಂಸ್ಥೆ ತನ್ನ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಕಾಲ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಮಂಗಳವಾರದಿಂದ ಅವರ ಜಾಹೀರಾತು ಮತ್ತು ಪ್ರಚಾರ ಚಟುವಟಿಕೆಗಳು ಅಧಿಕೃತವಾಗಿ ಆರಂಭವಾಗಲಿವೆ.

ಈ ಹಿನ್ನೆಲೆಯಲ್ಲಿ ಮೈಸೂರು ಸ್ಯಾಂಡಲ್ ಸೋಪನ್ನು ನವ ವಿನ್ಯಾಸದೊಂದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್ ಸೇರಿದಂತೆ ಸಂಸ್ಥೆಯ 57 ಉತ್ಕೃಷ್ಟ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಅಪಾರ ಬೇಡಿಕೆ ಇದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಪ್ರಚಾರ ರಾಯಭಾರಿಯಾಗಿರುವ ಅವಧಿಯಲ್ಲಿ ತಮನ್ನಾ ಭಾಟಿಯಾ ಅವರು ಇದೇ ರೀತಿಯ ಖಾಸಗಿ ಕಂಪನಿಗಳ ಉತ್ಪನ್ನಗಳಿಗೆ ರೂಪದರ್ಶಿಯಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ವಿಜಯಪುರ ಮತ್ತು ಡಾಬಸ್‌ಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ಉತ್ಪಾದನಾ ಘಟಕಗಳನ್ನು ಆರಂಭಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ರಫ್ತು ವಹಿವಾಟನ್ನು 25–30 ಕೋಟಿ ರೂಪಾಯಿಯಿಂದ ದ್ವಿಗುಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ.

ಇನ್ನು, ಕೆಎಸ್‌ಡಿಎಲ್ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ಅಪ್ಪಾಜಿ ನಾಡಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ಅವರು, ದೆಹಲಿ ಮತ್ತು ಮಧ್ಯ ಭಾರತದ ಮಾರುಕಟ್ಟೆ ವಿಸ್ತರಣೆಯೊಂದಿಗೆ 2025–26ರ ವೇಳೆಗೆ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ತಲುಪುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!