ಮೈಸೂರು: ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಆಯಾನ್(16), ಆಜಾನ್(13) ಹಾಗೂ ಲುಕ್ಮಾನ್(14) ಮೃತ ದುರ್ಧೈವಿಗಳಾಗಿದ್ದು, ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈಜಾಡಲು ಹೋದವರು ಜಲಸಮಾಧಿಯಾಗಿದ್ದು,
Advertisement
ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನುಳಿದ ಮತ್ತೊಬ್ಬನ ಶವಕ್ಕೆ ಶೋಧ ಕಾರ್ಯ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ಮೂವರು ಬಾಲಕರು ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈಜೋದಕ್ಕೆ ತೆರಳಿದ್ದರು.
ಈ ವೇಳೆಯಲ್ಲಿ ನೀರಲ್ಲಿ ಮುಳುಗಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿದ್ದು, ಸದ್ಯ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.


