ಮೈಸೂರು| ಹುಣಸೂರಿನಲ್ಲಿ ಹುಲಿ ಕಾಟ, ಇಬ್ಬರು ರೈತರ ಮೇಲೆ ದಾಳಿ

0
Spread the love

ಮೈಸೂರು:- ಜಿಲ್ಲೆಯ ಹುಣಸೂರಿನಲ್ಲಿ ಹುಲಿ ಕಾಟ ಹೆಚ್ಚಾಗಿದ್ದು, ಇಬ್ಬರು ರೈತರ ಮೇಲೆ ಮತ್ತೆ ಹುಲಿ ದಾಳಿ ನಡೆಸಿದೆ.

Advertisement

ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿ ದಾಳಿಯಿಂದ ಪಾರಾದವರು. ಹುಲಿ ಘರ್ಜಿಸುತ್ತಾ ದಾಳಿಗೆ ಬಂದಾಗ ಜೋರಾಗಿ ರೈತರು ಕಿರುಚಿಕೊಂಡಿದ್ದಾರೆ.

ಅಕ್ಕ ಪಕ್ಕದಲ್ಲಿದ್ದ ರೈತರು ಸಹ ಜೋರಾಗಿ ಕೂಗಿಕೊಂಡಿದ್ದರಿಂದ ಹುಲಿ ವಾಪಸ್ಸಾಗಿದೆ. ಸದ್ಯ ಹೊಲದಲ್ಲೇ ಹುಲಿ ಮರಿಗಳ ಜೊತೆ ಇರುವ ಶಂಕೆ ಇದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಹುಲಿ ಸೆರೆ ಹಿಡಿದ ನಂತರವಷ್ಟೆ ಸ್ಥಳದಿಂದ ಹೋಗುವಂತೆ ತಾಕೀತು ಮಾಡಿದ್ದಾರೆ.

ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ರಾತ್ರಿಯಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದು, 4 ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here