ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಸುಂಡವಾಳು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೃಷ್ಣಾಚಾರಿ(28) ಮೃತ ದುರ್ದೈವಿ. ಕೃಷ್ಣಾಚಾರಿ ಖಾಸಗಿ ಸಂಸ್ಥೆ ಹಾಗೂ ಕೈ ಸಾಲ ಮಾಡಿಕೊಂಡಿದ್ದ. ಸಾಲಗಾರರ ಒತ್ತಡದಿಂದ, ಸಾಲ ತೀರಿಸಲಾಗದೆ ಮನನೊಂದಿದ್ದ ಕೃಷ್ಣಾಚಾರಿ ಇದರಿಂದ ಬೇಸತ್ತು ಹೋಗಿದ್ದ.
Advertisement
ಹೀಗಾಗಿ ಎಗ್ಗೆರೆ ಕೆರೆ ಮುಂದೆ ನಿಂತು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆರೆ ಬಳಿ ಕೃಷ್ಣಾಚಾರಿಯ ಮೊಬೈಲ್ ಹಾಗೂ ಚಪ್ಪಲಿ ದೊರೆತಿದೆ. ತಾನು ಸಾಯುತ್ತಿರುವುದಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ನೇಹಿತರೊಬ್ಬರಿಗೂ ಸಹ ಮೊಬೈಲ್ನಲ್ಲಿ ತಿಳಿಸಿದ್ದಾರೆಂದು ಹೇಳಲಾಗಿದೆ. ಒಟ್ಟು 20 ಲಕ್ಷ ರೂ. ಸಾಲ ಇತ್ತು ಎನ್ನಲಾಗಿದೆ. ಪಿರಿಯಾಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.