ಮಂಗಳೂರು:- ಧರ್ಮಸ್ಥಳ ಯುವತಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಸೊಸೈಡ್ ಗೆ ಕಾರಣ ರಿವಿಲ್ ಆಗಿದೆ.
ಆಕಾಂಕ್ಷಾ ಎಸ್ ನಾಯರ್ ಮೃತ ದುರ್ದೈವಿ ಆಗಿದ್ದು, ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ನಡೆದಿದ್ದೇನು?
ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಅವರು, ಶನಿವಾರ ರಂದು ಪಂಜಾಬ್ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಆಕಾಂಕ್ಷಾ ಅವರು ಇದೇ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದರು. ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆಯಾಗಿದ್ದಾರೆ. ಆಕಾಂಕ್ಷಾ ಪ್ರಾಧ್ಯಾಪಕ ಮ್ಯಾಥ್ಯೂ ಜೊತೆ ಅವರ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದರು.
ಬಳಿಕ ಆಕಾಂಕ್ಷಾ ಕಾಲೇಜಿನಲ್ಲೂ ಬಿಜಿಲ್ ಮ್ಯಾಥ್ಯೂ ಅವರ ಜೊತೆ ಜಗಳವಾಡಿದ್ದಾರೆ. ನಂತರ, ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಮ್ಯಾಥ್ಯೂ ವಿರುದ್ಧ ಪಂಜಾಬ್ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.