ನಾಗಮಂಗಲ ಗಲಭೆ ಕೇಸ್: ಇದು ಆಕಸ್ಮಿಕ ಎಂದ ಗೃಹ ಸಚಿವ!

0
Spread the love

ಬೆಂಗಳೂರು:- ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಆಕಸ್ಮಿಕ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಗಣೇಶ ಮೂರ್ತಿ ವಿಸರ್ಜನೆಯ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಸಣ್ಣ ಘಟನೆಯಾಗಿದ್ದು ಕೋಮು ಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದರು.

ನಾಗಮಂಗಲದಲ್ಲಿ ನಿನ್ನೆ ಘಟನೆ ನಡೆಯಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಇವರು ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here