ವಾಲ್ಮೀಕಿ ಅವ್ಯವಹಾರ ಪ್ರಕರಣದಲ್ಲಿ ನಾಗೇಂದ್ರ ಪಾತ್ರದ ಬಗ್ಗೆ ತನಿಖೆಯಿಂದ ಹೊರಬರಬೇಕು: ಎಚ್ ಕೆ ಪಾಟೀಲ್‌

0
Spread the love

ಗದಗ: ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ವಿಚಾರವಾಗಿ ಗದಗನಲ್ಲಿ ಸಚಿವ ಎಚ್ ಕೆ ಪಾಟೀಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ ಐಟಿಯವರು ತನಿಖೆ ಮಾಡ್ತಿದಾರೆ. ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರದ ಬಗ್ಗೆ ತನಿಖೆಯಿಂದ ಹೊರ ಬರಬೇಕು. ತಪ್ಪು ಯಾರು ಎಸಗಿದ್ದಾರೆ ಎಂದು ಸುದ್ದಿಯನ್ನ ಓದಿ ಪ್ರತಿಕ್ರಿಯಿಸುವುದು ಸೂಕ್ತವಲ್ಲ.

Advertisement

ಅದಲ್ಲದೆ ತನಿಖೆ ನಡೆದಾಗ ಸಾರ್ವಜನಿಕ ಮುಂದಾಳುಗಳು ಚರ್ಚೆ ಮಾಡೋದು ಸೂಕ್ತವಾದ ಪ್ರಕ್ರಿಯೆ ಅಲ್ಲ, ಇವೆಲ್ಲ ಚರ್ಚೆಗಳು ತನಿಖೆ ಮೇಲೆ ಪ್ರಭಾವ ಬೀರುತ್ತವೆ‌. ಸಾರ್ವಜನಿಕ ಚರ್ಚೆ, ಪತ್ರಿಕಾ ಚರ್ಚೆ ಆಗದಿದ್ರೆ ಸರಿಯಾಗಿ ತನಿಖೆ ನಡೆಯುತ್ತವೆ. ಇಡಿ ಕೆಲ ಕ್ರಮ ಕೈಗೊಂಡಿದೆ. ನಂತರ ತಪ್ಪಿತಸ್ಥರ ಮೇಲೆ ಸರ್ಕಾರ ಕ್ರಮ ಜರಗಿಸುತ್ತದೆ ಎಂದು ಎಚ್ ಕೆ ಪಾಟೀಲ್‌ ಹೇಳಿದರು.

ಇನ್ನೂ ಡಿಸಿಎಂ ನಾಗೇಂದ್ರ ಪರ ಬ್ಯಾಡ್ ಬೀಸಿದ್ದಾರೆ ಎಂಬ ಪ್ರಶ್ನೆಗೆ ಕಾನೂನು ಸಚಿವರಾಗಿ ಹೇಳ್ತೇನಿ, ಸಾರ್ವಜನಿಕ ಚರ್ಚೆಯಿಂದ ತಪ್ಪು ಮಾಹಿತಿ ಬಂದಿದೆ. ಚರ್ಚೆ ಆಗದಿರೋದು ತನಿಖಾ ದೃಷ್ಟಿಯಿಂದ ಒಳ್ಳೆಯದು ಎಂದರು. ಮುಡಾ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಷಯಕ್ಕೆ,

ಯಾವ ಕಾರಣಕ್ಕಾಗಿ ಪ್ರತಿಭಟನೆ..? ಸಿಎಂ ಮನೆಯರಿಗೆ ಸೈಟ್ ಮಂಜೂರು ಮಾಡಿಕೊಂಡಿಲ್ಲ. ಕೊಟ್ಟ ಜಾಗೆಗೆ ಕೊಟ್ಟಂತಹ ಪರಿಹಾರವೇ ಹೊರತೂ ಸೈಟ್ ಮಂಜೂರು ಮಾಡಿದ್ದಲ್ಲ. ವ್ಯಾತ್ಯಾಸವನ್ನ ಅರ್ಥೈಸಿಕೊಳ್ಳಬೇಕು ಅಷ್ಟೆ. ಮುಡಾ ತಪ್ಪು ಹೆಜ್ಜೆಗಳ ಬಗ್ಗೆ ಏನು ಕ್ರಮ ತೆಗೆದುಕೊಳ್ಳಬೇಕು ಅನ್ನೋದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here