ಸಮಾಜ ಬಾಂಧವರು ಸಂಘಟಿತರಾಗಿ : ನಾರಾಯಣಸಾ ಬಾಂಡಗೆ

0
Namuru Dussehra of SSK Samaj
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಸ್.ಎಸ್.ಕೆ ಸಮಾಜ ಚಿಕ್ಕ ಸಮಾಜವಾದರೂ ಎಲ್ಲರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಬದುಕುತ್ತಿರುವದು ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸದಸ್ಯ, ಬಾಗಲಕೋಟೆಯ ನಾರಾಯಣಸಾ ಬಾಂಡಗೆ ಹೇಳಿದರು.

Advertisement

ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರಬಾರ ವೇದಿಕೆಯಲ್ಲಿ ಜರುಗಿದ `ನಮ್ಮೂರು ದಸರಾ-2024′ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎಸ್‌ಎಸ್‌ಕೆ ಸಮಾಜ ಬಾಂಧವರು ಗದಗ ನಗರದಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತಾ ಬಂದಿರುವುದು ವಿಶೇಷವಾಗಿದೆ. ಗದುಗಿನ ಎಸ್‌ಎಸ್‌ಕೆ ಸಮಾಜದಲ್ಲಿ ಸುಶಿಕ್ಷಿತರು ಹಾಗೂ ಸಂಸ್ಕಾರವಂತರು ಹೆಚ್ಚಿನ ಪ್ರಮಾಣದಲ್ಲಿ ಇರುವದರಿಂದ ಅವರೆಲ್ಲರೂ ಇತರರಿಗೆ ಪ್ರೋತ್ಸಾಹ ನೀಡಿ ಬೆಳೆಸುತ್ತಿರುವುದು ಹೆಮ್ಮೆಯ ವಿಷಯ.

ದೇವಿಯ ಆಶೀರ್ವಾದದಿಂದ ನಾನೂ ರಾಜ್ಯಸಭಾ ಸದಸ್ಯನಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಸರಕಾರದ ಸವಲತ್ತುಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರೂ ಸಂಘಟಿತರಾಗಿ ಸಮಾಜವನ್ನು ಗಟ್ಟಿಗೊಳಿಸಬೇಕು. ಮಕ್ಕಳಿಗೆ ಸಂಸ್ಕಾರ ಮನೆಯಿಂದಲೇ ಆರಂಭವಾಗಬೇಕು. ಈ ನಿಟ್ಟಿನಲ್ಲಿ ಮಹಿಳೆಯರು ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಎಸ್.ಎಸ್.ಕೆ ಸಮಾಜ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ವಹಿಸಿದ್ದರು. ರವಿ ಶಿದ್ಲಿಂಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಪಂಚ ಕಮಿಟಿಯ ಉಪಾಧ್ಯಕ್ಷ ರಾಜು ಬದಿ, ದಸರಾ ಕಮಿಟಿಯ ಚೇರಮನ್ ವಿಷ್ಣುಸಾ ಶಿದ್ಲಿಂಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಂಚ ಕಮಿಟಿಯ ಸದಸ್ಯರಾದ ಎನ್.ಆರ್. ಖಟವಟೆ, ವಿಶ್ವನಾಥಸಾ ಖಟವಟೆ, ಸುರೇಶಕುಮಾರ ಬದಿ, ಬಲರಾಮ ಬಸವಾ, ಮೋತಿಲಾಲಸಾ ಪೂಜಾರಿ, ಮಾರುತಿ ಪವಾರ, ಶ್ರೀನಿವಾಸ ಬಾಂಡಗೆ, ಶ್ರೀಕಾಂತ ಖಟವಟೆ, ಪರಶುರಾಮಸಾ ಬದಿ, ಗಣಪತಸಾ ಜಿತೂರಿ, ವಿನೋದ ಬಾಂಡಗೆ, ಪ್ರಕಾಶ ಬಾಕಳೆ, ಗಂಗಾಧರ ಹಬೀಬ, ಅನಿಲ್ ಖಟವಟೆ, ಅಂಬಾಸಾ ಖಟವಟೆ, ವಿಶ್ವನಾಥ ಸೂಳಂಕಿ, ಸಾಗರ ಪವಾರ, ರಾಘವೇಂದ್ರ ಬಾಂಡಗೆ, ಸತೀಶ ದವಳೆ, ಶ್ರೀಕಾಂತ ಬಾಕಳೆ, ಮೋಹನಸಾ ಪವಾರ, ನಾಗರಾಜ ಖೋಡೆ, ಮಾಧು ಬದಿ, ಉಮಾಬಾಯಿ ಬೇವಿನಕಟ್ಟಿ, ಸ್ನೇಹಲತಾ ಕಬಾಡಿ ಮುಂತಾದವರು ಉಪಸ್ಥಿತರಿದ್ದರು. ಜಿ.ಎನ್. ಹಬೀಬ ನಿರೂಪಿಸಿದರು. ಸುಧೀರ ಕಾಟೀಗರ ವಂದಿಸಿದರು.

ಎಸ್.ಎಸ್.ಕೆ ಸಮಾಜದ ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ ಮಾತನಾಡಿ, ಎಸ್‌ಎಸ್‌ಕೆ ಸಮಾಜಕ್ಕೆ ದಸರಾ ಹಬ್ಬ ವಿಶೇಷವಾಗಿದೆ. ಹಿಂದಿನ ಹಿರಿಯರು ಸಮಾಜಕ್ಕೆ ಭದ್ರ ಬುನಾದಿ ಹಾಕಿ ದಸರಾ ಹಬ್ಬಕ್ಕೆ ಹೊಸ ಮೆರಗು ನೀಡಿದ್ದಾರೆ. ಈಗಾಗಲೇ ನಗರದಲ್ಲಿ ಸಮಾಜದ ವತಿಯಿಂದ ಮೂರು ದೇವಸ್ಥಾನ, ಎರಡು ಕಲ್ಯಾಣ ಮಂಟಪ, ಒಂದು ಶಾಲೆಯನ್ನು ನಿರ್ಮಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ನಮ್ಮೂರ ದಸರಾವನ್ನು ಅದ್ದೂರಿಯಾಗಿ ಆಚರಿಸಲು ಸಮಾಜದ ಗುರು-ಹಿರಿಯರು, ಮಹಿಳಾ ಮಂಡಳದವರು ಹಾಗೂ ದಸರಾ ಮಹೋತ್ಸವದ ಪದಾಧಿಕಾರಿಗಳ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here