ನಂದಿನಿ ಹಾಲಿಗೆ ನೀರು ಬೆರಸಿ ಡೈರಿ ಸಿಬ್ಬಂದಿಯಿಂದಲೇ ಮಹಾ ಮೋಸ!

0
Spread the love

ಚಿಕ್ಕಬಳ್ಳಾಪುರ:- ಶುದ್ದ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ಡೈರಿಗಳ ಸಿಬ್ಬಂದಿಗಳೇ ವಂಚನೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

Advertisement

ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ಹಸುವಿನ ಹಾಲಿಗೆ ಮನಸ್ಸೊ ಇಚ್ಚೆ ನೀರು ಮಿಶ್ರಣ ಮಾಡಿ ನಂದಿನಿ ಗ್ರಾಹಕರು ಹಾಗೂ ಚಿಮುಲ್​ಗೆ ವಂಚನೆ ಮಾಡಲು ಯತ್ನಿಸಿದ್ದಾರೆ.

ಹೌದು ಸ್ವತಃ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಹಾಲಿನ ಡಂಪ್ ಟ್ಯಾಂಲ್​ಗೆ ನೀರು ಕಲಬೆರಕೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ.

ಇನ್ನೂ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗುತ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ. ಶ್ರೀನಿವಾಸಗೌಡ ಅಲರ್ಟ ಆಗಿದ್ದು, ಡೈರಿಯ ಸಹಾಯಕ ಚೇತನ್ ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here