ಚಿಕ್ಕಬಳ್ಳಾಪುರ:- ಶುದ್ದ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ಡೈರಿಗಳ ಸಿಬ್ಬಂದಿಗಳೇ ವಂಚನೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
Advertisement
ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ಹಸುವಿನ ಹಾಲಿಗೆ ಮನಸ್ಸೊ ಇಚ್ಚೆ ನೀರು ಮಿಶ್ರಣ ಮಾಡಿ ನಂದಿನಿ ಗ್ರಾಹಕರು ಹಾಗೂ ಚಿಮುಲ್ಗೆ ವಂಚನೆ ಮಾಡಲು ಯತ್ನಿಸಿದ್ದಾರೆ.
ಹೌದು ಸ್ವತಃ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಹಾಲಿನ ಡಂಪ್ ಟ್ಯಾಂಲ್ಗೆ ನೀರು ಕಲಬೆರಕೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ.
ಇನ್ನೂ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗುತ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ. ಶ್ರೀನಿವಾಸಗೌಡ ಅಲರ್ಟ ಆಗಿದ್ದು, ಡೈರಿಯ ಸಹಾಯಕ ಚೇತನ್ ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.