ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯ, ವಾರ್ತಾ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ರಾಷ್ಟ್ರೀಯ ಡೆಂಗಿ ದಿನದ ನಿಮಿತ್ತ ಜಿಲ್ಲಾ ಮಟ್ಟದ ಮಾನವ ಸರಪಳಿ ಪ್ರದರ್ಶನ, ಜನಜಾಗೃತಿ ಕಾರ್ಯಕ್ರಮ ಜರುಗಿತು.
ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಜಗದೇವ ಬಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಜಿಲ್ಲಾ ಮಟ್ಟದ ಮಾನವ ಸರಪಳಿ ಪ್ರದರ್ಶನ, ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪರಿಸರ ಸ್ವಚ್ಛತೆ ಹಾಗೂ ನೀರಿನ ಸರಿಯಾದ ನಿರ್ವಹಣೆ ಮೂಲಕ, ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಡೆಂಗಿ ಜ್ವರವನ್ನು ಹರಡದಂತೆ ತಡೆಯಬಹುದು. ಡೆಂಗಿ ನಿಯಂತ್ರಣಕ್ಕೆ ಸಮುದಾಯದ ಸಹಭಾಗಿತ್ವ ಅವಶ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ್ ಖೋನಾ, ಕೀಟಶಾಸ್ತ್ರಜ್ಞರಾದ ಅನ್ನಪೂರ್ಣ ಶೆಟ್ಟರ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಕಾಂಬ್ಳೆ, ಬಿ.ಎಮ್. ಹುಲ್ಯಾಳ, ಈರಣ್ಣ ಚಲ್ಕಿ, ಆರೋಗ್ಯ ಇಲಾಖೆ ಸಿಬ್ಬಂದಿ ಎಸ್.ಎನ್. ಲಿಂಗದಾಳ, ಅಜಯಕುಮಾರ ಕಲಾಲ, ರಿಯಾಜ ಫೋಡುನಾಯ್ಕರ, ಎಮ್.ಹೆಚ್. ಕದಾಂಪೂರ, ಪ್ರಭು ಹೊನ್ನಗುಡಿ, ಬಿ.ಸಿ. ಹೀರೆಹಾಳ, ಏಕನಾಥ ಪಾಟೀಲ, ಎಸ್.ಬಿ. ಗಡಾದ, ವಾಯ್.ಎನ್. ಕಡೆಮನಿ, ಎಸ್.ಎನ್. ಕಟ್ಟಿಮನಿ, ವಾಯ್.ವಾಯ್. ಹಕ್ಕಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಮಾನವ ಸರಪಳಿ ಪ್ರದರ್ಶನ, ಜನಜಾಗೃತಿ ಕಾರ್ಯಕ್ರಮದಲ್ಲಿ ಗಾಂಧಿ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಸ್ತೆ ಉದ್ದಕ್ಕೂ ಡೆಂಗಿ ಕುರಿತು ಧ್ವನಿವರ್ಧಕದ ಮೂಲಕ ಅರಿವು ಮೂಡಿಸಲಾಯಿತು. ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತ ಬೀದಿಗಳಲ್ಲಿ ಸಂಚರಿಸಿ, ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚಲಾಯಿತು.