ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ವಿವಿಧ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ರಾಮಣ್ಣ ಹೂವಣ್ಣವರ ಹೇಳಿದರು.
ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಖಾದ್ಯತೈಲ ಎಣ್ಣೆಕಾಳು ಅಭಿಯಾನ ಯೋಜನೆಯಲ್ಲಿ ಸೂರ್ಯಕಾಂತಿ ಬೀಜಗಳ ಕಿರುಚೀಲಗಳನ್ನು ವಿತರಿಸಿ ಮಾತನಾಡಿದರು.
ರೈತರು ಸರ್ಕಾರದ ಯೋಜನೆಗಳನ್ನು ಪಡೆಯುವ ಮೂಲಕ ಆರ್ಥಿಕವಾಗಿ ಸದೃಢವಾಗಬಹುದು. ಅಲ್ಲದೆ, ಕೃಷಿ ಇಲಾಖೆಯು ನೀಡುವ ಹಲವಾರು ಮಾಹಿತಿಗಳ ಅನ್ವಯ ರೈತರು ತಮ್ಮ ಬೆಳೆಗಳಗಳನ್ನು ರಕ್ಷಣೆ ಮಾಡಬಹುದು. ಆದ್ದರಿಂದ ರೈತರು ಸರ್ಕಾರದ ಯೋಜನೆಗಳನ್ನು ಪಡೆಯಲು ಮುಂದೆ ಬರಬೇಕು ಎಂದು ಹೇಳಿದರು.
ಕೃಷಿ ಅಧಿಕಾರಿಗಳಾದ ಬಸವರಾಜೇಶ್ವರಿ ಸಜ್ಜನರ ಮಾತನಾಡಿ, ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ವಿಸ್ತೀರ್ಣವನ್ನು ಹೆಚ್ಚಿಸುವುದು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಅಟಲ್ ಭೂ ಜಲ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳು ಲಭ್ಯವಿದ್ದು, ರೈತರು ರೈತ ಸಂಪರ್ಕ ಕೇಂದ್ರ ಬೆಟಗೇರಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಗದಗ ತಾಲೂಕ ಕೃಷಿಕ ಸಮಾಜದ ಉಪಾಧ್ಯಕ್ಷ ಎಂ.ಎಸ್. ಮಲ್ಲಾಪುರ ಮಾತನಾಡಿದರು. ಈ ಸಂದರ್ಭದಲ್ಲಿ ಚನ್ನಪ್ಪ ಹುಬ್ಬಳ್ಳಿ, ವೆಂಕಟೇಶ ದೋಂಗಡೆ, ಪ್ರಸನ್ನಗೌಡ ಮಲ್ಲಾಪೂರ, ಚಂದ್ರಗೌಡ ಪಾಟೀಲ, ಚಂದ್ರಶೇಖರ ವಸ್ತ್ರದ, ಮಲ್ಲಿಕಾರ್ಜುನ ರಾಯಚೂರ, ಶಿವು ಟೆಂಗಿನಕಾಯಿ, ಮಹಾಂತೇಶ ಕಮತರ, ನಿಂಗಪ್ಪ ಮಣ್ಣೂರ, ಪಂಚಪ್ಪ ಬಳಿಗೇರ, ಅಂದಪ್ಪ ಮೆಣಸಿನಕಾಯಿ, ಮಂಜುನಾಥ ಸಜ್ಜನ, ಗೌರಮ್ಮ ಲಕ್ಕುಂಡಿ ಸೇರಿದಂತೆ ಲಕ್ಕುಂಡಿ ಗ್ರಾಮದ ನೂರಾರು ರೈತರು ಪಾಲ್ಗೊಂಡಿದ್ದರು.