HomeGadag Newsಮೇ 22ರಿಂದ ರಾಷ್ಟ್ರಮಟ್ಟದ ‘ಮೂಟ್ ಕೋರ್ಟ್’ ಮಹಾಸ್ಪರ್ಧೆ

ಮೇ 22ರಿಂದ ರಾಷ್ಟ್ರಮಟ್ಟದ ‘ಮೂಟ್ ಕೋರ್ಟ್’ ಮಹಾಸ್ಪರ್ಧೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗಳ ಗದಗ ನಗರ ಮತ್ತೊಮ್ಮೆ ರಾಷ್ಟ್ರಮಟ್ಟದ ಕಾನೂನು ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಕೆ.ಎಲ್.ಇ. ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ವತಿಯಿಂದ ಮೇ 22ರಿಂದ 24ರವರೆಗೆ 3ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ–2026 ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 27 ಕಾನೂನು ವಿದ್ಯಾರ್ಥಿ ತಂಡಗಳು ಭಾಗವಹಿಸುತ್ತಿದ್ದು, ಮೂರು ದಿನಗಳ ಕಾಲ ಗದಗದಲ್ಲಿ ಕಾನೂನು ವಾದ-ಪ್ರತಿವಾದಗಳ ಸಿಡಿಲು ಮೊಳಗಲಿದೆ.

ಈ ಕುರಿತು ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ಮಾಹಿತಿ ನೀಡಿದರು.

ಈ ವರ್ಷದ ಸ್ಪರ್ಧೆ “ಹಿಂದೂ ಕಾನೂನಿನ ದಾಂಪತ್ಯ ಹಕ್ಕುಗಳ ಮರುಸ್ಥಾಪನೆ” ವಿಷಯವನ್ನು ಆಧರಿಸಿಕೊಂಡಿದ್ದು, ಕಾನೂನು ವಿದ್ಯಾರ್ಥಿಗಳಲ್ಲಿ ವಾದ ಮಂಡನೆ, ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಅರಿವು ಬೆಳೆಸುವ ಉದ್ದೇಶ ಹೊಂದಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆ ಯುವ ಕಾನೂನು ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಮಹತ್ವದ ವೇದಿಕೆಯಾಗಲಿದೆ ಎಂದರು.

ಮೇ 22ರಂದು ಸಂಜೆ 5 ಗಂಟೆಗೆ ಗದಗದ ಜೆ.ಟಿ. ಕಾಲೇಜು ಆವರಣದ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಹಾತ್ಮ ಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. (ಡಾ.) ಸುರೇಶ ವಿ. ನಾಡಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಡಾ. ಸಂಜೀವ ಎಂ. ಹುಲ್ಲೂರ ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಡಾ. ಜಗದೀಶ ಎಸ್. ಹಾಲಶೆಟ್ಟಿ ಹಾಗೂ ಜೆ.ಟಿ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಎ. ಮಾನ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತು, ಕ್ವಾರ್ಟರ್ ಫೈನಲ್, ಸೆಮಿ ಫೈನಲ್ ಹಾಗೂ ಅಂತಿಮ ಸುತ್ತುಗಳು ನಡೆಯಲಿವೆ.

ಮೇ 24ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ ಸಮಾರೋಪ ಭಾಷಣ ಮಾಡಲಿದ್ದಾರೆ.

ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಉಮೇಶ ಮಂಜುನಾಥ ಭಟ್ ಅಡಿಗ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಎಂ.ಐ. ಶಿಗ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕೆ.ಎಲ್.ಇ. ಕಾನೂನು ಮಹಾವಿದ್ಯಾಲಯ, ಬೆಂಗಳೂರಿನ ಪ್ರಾಚಾರ್ಯ ಹಾಗೂ ಕಾನೂನು ಅಕಾಡೆಮಿ ನಿರ್ದೇಶಕ ಡಾ. ಜೆ.ಎಂ. ಮಲ್ಲಿಕಾರ್ಜುನಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ. ಶೆಲ್ಲಿಕೇರಿ ಮತ್ತು ಎಸ್.ಎಫ್. ಹಾದಿಮನಿ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಎ. ಮಾನ್ವಿ, ಎಸ್.ಎಫ್. ಹಾದಿಮನಿ, ಬಿ.ಜಿ. ಶೆಲ್ಲಿಕೇರಿ, ಪಿ.ಜಿ. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!