ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ: ಛಲವಾದಿ ನಾರಾಯಣಸ್ವಾಮಿ

0
Spread the love

ಮೈಸೂರು: ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್‌ ಇಂದಿನ ಆದೇಶದಿಂದ ಖಾತ್ರಿಯಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದಿದ್ದರೆ ರಾಜ್ಯದಲ್ಲಿ ಮಾತ್ರವಲ್ಲ. ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡ್ತೀವಿ ಅಂತ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

Advertisement

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್‌ ಇಂದಿನ ಆದೇಶದಿಂದ ಖಾತ್ರಿಯಾಗಿದೆ.ಉಪ್ಪು ತಿಂದವರು ನೀರು ಕುಡಿಯಲೇಬೇಕು ಅನ್ನೋದು ಸಹ ಇದರಿಂದ ಜನ ಅರ್ಥಮಾಡಿ ಕೊಂಡಿದ್ದಾರೆ.

ಈ ದೇಶದ ಕಾನೂನನ್ನು ಧಿಕ್ಕರಿಸಿ ಮಾಡುವ ಯಾವುದೇ ಪ್ರಯತ್ನಗಳು ಸಹ ಸಾಂದರ್ಭಿಕವಾಗಿ ತತಕ್ಷಣಕ್ಕೆ ಅವರಿಗೆ ಒಳ್ಳೆಯದಾಗಬಹುದು. ಆದ್ರೆ ದೀರ್ಘಕಾಲವಾಗಿ ಇರಲ್ಲ. ಕಾನೂನನ್ನು ಮುರಿಯುವವರಿಗೆ, ವಿರೋಧಿಸುವವರಿಗೆ ನ್ಯಾಯ ಸಿಗ್ಲಲ ಅನ್ನೋದನ್ನ ಹೈಕೋರ್ಟ್‌ ಆದೇಶ ಎತ್ತಿಹಿಡಿದಿದೆ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here