ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಿತು.
ಗದಗ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ವಸಂತ ಸಿದ್ದಮ್ಮನಹಳ್ಳಿ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶರಣು ಗೋಗೇರಿ, ಬಸವರಾಜ ಹಾತಲಗೇರಿ, ಮಂಜುನಾಥ ಹಾತಲಗೇರಿ, ಕುಸ್ತಿ ತರಬೇತುದಾರ ಬಾಹುಬಲಿ, ಹಾಕಿ ತರಬೇತುದಾರ ಮಂಜು ಬಾಗಡೆ, ಸೈಕ್ಲಿಂಗ್ ತರಬೇತುದಾರ ವಿದ್ಯಾ ಕುಲಕರ್ಣಿ ಸೇರಿದಂತೆ ಮಹಿಳೆಯರು ಹಾಗೂ ಕುಸ್ತಿಪಟುಗಳು ಉಪಸ್ಥಿತರಿದ್ದರು.



